Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:29 - ಕನ್ನಡ ಸತ್ಯವೇದವು C.L. Bible (BSI)

29 ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:29
21 ತಿಳಿವುಗಳ ಹೋಲಿಕೆ  

ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


“ಪರದೇಶೀಯರನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದಿರಲ್ಲವೆ? ಅಂಥವರ ಮನೋವ್ಯಥೆ ನಿಮಗೆ ಗೊತ್ತೇ ಇದೆ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ವಧಿಸುತಿಹರು ವಿಧವೆಯರನು, ಪರದೇಶಿಯರನು I ಹತ್ಯಮಾಡುತಿಹರು ಗತಿಯಿಲ್ಲದ ಅನಾಥರನು II


“ನಿಮ್ಮ ನಾಡಿನಲ್ಲಿ ತಂಗಿರುವ ಹೊರನಾಡಿಗರಿಗೆ ಅನ್ಯಾಯವೇನೂ ಮಾಡಬಾರದು.


“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.


ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು