Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:23 - ಕನ್ನಡ ಸತ್ಯವೇದವು C.L. Bible (BSI)

23 ಸಮಸ್ತ ಕಸ್ದೀಯರು, ಪಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಸ್ಸೀರಿಯರೆಲ್ಲರನ್ನೂ ನಾನು ನಿನಗೆ ವಿರುದ್ಧ ಎಬ್ಬಿಸಿ, ಎಲ್ಲ ಕಡೆಯಿಂದಲೂ ನಿನ್ನ ಮೇಲೆ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು ಮತ್ತು ಅಶ್ವರೂಢರು ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:23
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆನ್ನುತ್ತಾರೆ: “ಮೆರಾಥಯಿಮ್ ನಾಡಿಗೂ ಪಕೋದಿನ ನಿವಾಸಿಗಳಿಗೂ ವಿರುದ್ಧ ದಂಡೆತ್ತಿಹೋಗಿ ಅವರನ್ನು ಸಂಹರಿಸು. ಆ ನಾಡನ್ನು ಪೂರ್ತಿಯಾಗಿ ಹಾಳುಮಾಡು. ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ಇವಳು ನಾಯಕ-ಉಪನಾಯಕರೂ ಯೋಧರೂ ವಿಚಿತ್ರ ವಸ್ತ್ರಧಾರಿಗಳೂ ಅಶ್ವಾರೂಢರೂ ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿದಳು.


ತನ್ನ ಮಿಂಡರನ್ನು ಅಂದರೆ, ಯೋಧರು, ನೀಲಾಂಬರರು, ಅಶ್ವಾರೂಢರು, ನಾಯಕ-ಉಪನಾಯಕರು ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿ ಅವರಿಗೆ


ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.


ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.


ಇಷ್ಮಾಯೇಲ್ಯರು ಹವೀಲ ಹಾಗು ಶೂರಿನ ಮಧ್ಯೆಯಿರುವ ಪ್ರದೇಶದಲ್ಲಿ ವಾಸಮಾಡಿದರು. ಶೂರ್ ಈಜಿಪ್ಟಿನ ಪೂರ್ವಕ್ಕೆ ಅಸ್ಸೀರಿಯಗೆ ಹೋಗುವ ಹಾದಿಯಲ್ಲಿದೆ. ಹೀಗೆ ಇಷ್ಮಾಯೇಲ್ಯರು ತಮ್ಮ ಸಂಬಂಧಿಕರಿಗೆ ಎದುರುಬದುರಿನಲ್ಲೇ ವಾಸಮಾಡಿದರು.


ಮೂರನೇ ನದಿಯ ಹೆಸರು ಟೈಗ್ರಿಸ್. ಇದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತದೆ. ನಾಲ್ಕನೆಯದು ಯೂಫ್ರೆಟಿಸ್ ನದಿ.


ಅಂತೆಯೇ ಅವನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ವಾಸಮಾಡಿದನು; ಅವನ ತಂದೆಯ ಮರಣಾನಂತರ ದೇವರು ಅವನನ್ನು ನೀವು ವಾಸಮಾಡುತ್ತಿರುವ ಈ ನಾಡಿಗೆ ಕರೆತಂದರು.


“ಇವಳು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು; ಬಾಬಿಲೋನಿಯರ ಚಿತ್ರಗಳನ್ನು ಅಂದರೆ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ಚುಂಗಿನ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ಆ ಬಾಬಿಲೋನಿನ ಕಸ್ದೀಯರ ಆಕಾರಗಳನ್ನು ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ ಇವಳು ಮೋಹಗೊಳ್ಳುತ್ತಿದ್ದಳು.


ಹೀಗಿರಲು, ಒಹೊಲೀಬಳೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ಯಾವ ಮಿಂಡರಿಂದ ನಿನ್ನ ಆಸೆ ತೊಲಗಿತೋ ಆ ಮಿಂಡರನ್ನು ಅಂದರೆ, ಮನೋಹರ ಯುವಕರು, ಎಲ್ಲ ನಾಯಕ ಉಪನಾಯಕರು, ಪ್ರಭುಪ್ರಧಾನರು, ಅಶ್ವಾರೂಢರು ಆದ ಬಾಬಿಲೋನಿನವರು,


ಆಮೇಲೆ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು