Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:26 - ಕನ್ನಡ ಸತ್ಯವೇದವು C.L. Bible (BSI)

26 ನಿನ್ನ ವಸ್ತ್ರಗಳನ್ನು ಸೆಳೆದು, ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿನ್ನ ವಸ್ತ್ರಗಳನ್ನು ಸೆಳೆದು ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿನ್ನಲ್ಲಿರುವ ಉತ್ಕೃಷ್ಟವಾದ ಬಟ್ಟೆ, ಆಭರಣಗಳನ್ನೆಲ್ಲಾ ಸುಲುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:26
13 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು, ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.


ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಇವುಗಳನ್ನು ನಾನು ನೋಡಿ, ನೀನು ರಮಿಸಿದ ನಿನ್ನ ಎಲ್ಲ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತ ಜಾರರನ್ನೂ, ನೀನು ಹಗೆಮಾಡಿದ ಎಲ್ಲರನ್ನೂ, ಸುತ್ತುಮುತ್ತಲು ನಿನಗೆ ವಿರುದ್ಧ ಒಟ್ಟುಗೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.


ನೀನು ಪುಣ್ಯಕ್ಷೇತ್ರಗಳನ್ನು ನಿರ್ಮಿಸಿ, ನಿನ್ನ ನಾನಾ ಶೈಲಿಯ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ, ಹಿಂದೆಂದೂ ನಡೆಯದಂತಹ, ಮುಂದೆ ಎಂದೂ ನಡೆಯಬಾರದಂತಹ ವ್ಯಭಿಚಾರವನ್ನು ನಡೆಸಿದೆ.


ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಕೂಡಿಸಿಟ್ಟ ಎಲ್ಲವನ್ನು ಬಾಬಿಲೋನಿಯಾಗೆ ಕೊಂಡೊಯ್ಯುವ ದಿನ ಬರುವುದು; ಇಲ್ಲಿ ಏನೂ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು