Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:4 - ಕನ್ನಡ ಸತ್ಯವೇದವು C.L. Bible (BSI)

4 ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರ ಹೆಸರುಗಳೇನಂದರೆ, ಒಹೊಲ ಎಂಬದು ಅಕ್ಕನದು, ಒಹೊಲೀಬ ಎಂಬದು ತಂಗಿಯದು; ಅವರು ನನ್ನ ಹೆಂಡರಾಗಿ ಗಂಡುಹೆಣ್ಣುಮಕ್ಕಳನ್ನು ಹೆತ್ತರು. (ಒಹೊಲ ಎಂಬದು ಸಮಾರ್ಯವನ್ನೂ, ಒಹೊಲೀಬ ಎಂಬದು ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಬ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:4
22 ತಿಳಿವುಗಳ ಹೋಲಿಕೆ  

“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


“ಅವರು ನಿನ್ನ ವಿಷಯದಲ್ಲಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು; ಕತ್ತಿಗಳಿಂದ ತುಂಡರಿಸುವರು.


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞವಾಗಿ ಅರ್ಪಿಸಿದೆ.


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.


ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.


ಒಹೊಲಳು ನನ್ನವಳಾಗಿದ್ದರೂ ಹಾದರ ನಡೆಸಿ


ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೇ? ಹಾಗಾದರೆ ಅವರ ದುರಾಚಾರಗಳನ್ನು ಅವರಿಗೆ ತಿಳಿಸು.


ಸೂಳೆಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟಹೆಂಗಸರಾದ ಒಹೊಲಳನ್ನೂ ಒಹೊಲೀಬಳನ್ನೂ ಸೇರಿದರು.


ಅಂತೆಯೇ ಹೊಶೇಯನು ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಂದು ಗಂಡುಮಗುವನ್ನು ಹೆತ್ತಳು.


ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.


ಅವಳು ಇಂಥವುಗಳನ್ನೆಲ್ಲ ಮಾಡಿದ ಮೇಲೆ ನನ್ನ ಬಳಿಗೆ ಮರಳಿ ಬಂದೇ ಬರುವಳು ಎಂದುಕೊಂಡಿದ್ದೆ. ಆದರೆ ಬರಲಿಲ್ಲ. ಆಗ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ಇದನ್ನು ನೋಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು