Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:12 - ಕನ್ನಡ ಸತ್ಯವೇದವು C.L. Bible (BSI)

12 ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಬಲು ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “‘ತನ್ನ ಕಿಲುಬುಗಳ ಕಲೆಯನ್ನು ತೆಗೆಯಲು ಜೆರುಸಲೇಮ್ ತುಂಬಾ ಕಷ್ಟಪಡಬಹುದು. ಆದರೆ ಆ ಕಿಲುಬು ಹೋಗುವದಿಲ್ಲ. ಬೆಂಕಿಯು ಮಾತ್ರ ಕಿಲುಬನ್ನು ತೆಗೆದುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:12
19 ತಿಳಿವುಗಳ ಹೋಲಿಕೆ  

ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.


ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.


ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು