Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:16 - ಕನ್ನಡ ಸತ್ಯವೇದವು C.L. Bible (BSI)

16 “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ, ಸದ್ದಿಲ್ಲದೆ ಮೊರೆಯಿಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನರಪುತ್ರನೇ, ನೀನು ನಿನ್ನ ಹೆಂಡತಿಯನ್ನು ಬಹಳವಾಗಿ ಪ್ರೀತಿಸುತ್ತಿ. ಆದರೆ ನಾನು ಆಕೆಯನ್ನು ನಿನ್ನಿಂದ ತೆಗೆದು ಬಿಡುವೆನು. ನಿನ್ನ ಹೆಂಡತಿಯು ಫಕ್ಕನೆ ತೀರಿಹೋಗುವಳು. ಆದರೆ ನೀನು ನಿನ್ನ ದುಃಖವನ್ನು ಪ್ರದರ್ಶಿಸಬಾರದು. ನೀನು ಗಟ್ಟಿಯಾಗಿ ರೋಧಿಸಬಾರದು. ಅಳಬೇಡ ಅಥವಾ ಕಣ್ಣೀರು ಸುರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:16
17 ತಿಳಿವುಗಳ ಹೋಲಿಕೆ  

“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.


“ಹೀಗೆ ಆಜ್ಞೆಯಾಗಲು, ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿ ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದುಕೊಂಡೆನು.


ನಾನು ನನ್ನ ನಲ್ಲನ ನಲ್ಲೆ ಆತನ ಆಸೆ ನನ್ನ ಮೇಲೆ !


ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.


ಸರ್ವೇಶ್ವರ ಮತ್ತೆ ನನಗೆ ಹೀಗೆಂದರು : “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ.


ಜನರು : “ಅವರು ತ್ವರೆಯಾಗಿ ಬಂದು ನಮಗೋಸ್ಕರ ಗೋಳೆತ್ತಲಿ ನಮ್ಮ ಕಣ್ಣುಗಳಿಂದ ನೀರು ಧಾರಾಕಾರವಾಗಿ ಸುರಿವಂತೆ ಮಾಡಲಿ ಕಣ್ಣಿನ ರೆಪ್ಪೆಗಳಿಂದ ನೀರು ಉಕ್ಕಿ ಹರಿವಂತೆ ಮಾಡಲಿ.”


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು.


ಸಿರಿಸಂಪತ್ತು ನಿನ್ನನು ಕುಚೋದ್ಯಕ್ಕೆ ನೂಕೀತು, ಎಚ್ಚರಿಕೆ! ಹೆಚ್ಚು ಲಂಚಕೋರತನದಿಂದ ವಂಚಿತನಾಗಬೇಡ.


ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.


“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -


ಅವನು ಕುಲನಾಯಕನಾಗಿರುವುದರಿಂದ ತನ್ನನ್ನೇ ಅಪವಿತ್ರ ಮಾಡಿಕೊಳ್ಳಕೂಡದು. ಮಾಡಿಕೊಂಡರೆ ಯಾಜಕ ಸೇವಾವೃತ್ತಿಗೆ ಅಯೋಗ್ಯನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು