Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:6
33 ತಿಳಿವುಗಳ ಹೋಲಿಕೆ  

“ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -


ಧಿಕ್ಕಾರ ರಕ್ತಮಯವಾದ ನಗರಕೆ! ತುಂಬಿದೆ ಅದರಲಿ ಸುಳ್ಳು ಮತ್ತು ಸುಲಿಗೆ ನಿಲ್ಲದೆ ನಡೆಯುತ್ತಿದೆ ಅದರಲಿ ಕೊಳ್ಳೆ.


ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.


ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಈ ಪಟ್ಟಣ ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿ ಮಾಂಸವಾಗುವುದಿಲ್ಲ; ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು.


ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.


ನಿರಪರಾಧಿಗಳ ಹತ್ಯೆಯಿಂದ ಜೆರುಸಲೇಮನ್ನು ರಕ್ತಮಯವಾಗಿಸಿದ್ದ ಮನಸ್ಸೆಯ ದುಷ್ಕೃತ್ಯಗಳನ್ನು ಸರ್ವೇಶ್ವರ ಕ್ಷಮಿಸದೆ ಹೋದರು;


ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,


ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;


ಯುದ್ಧದ ಸಾಮಾನುಗಳಲ್ಲದೆ ಸಲಕೆ ನಿಮ್ಮ ಬಳಿಯಲ್ಲೇ ಇರಬೇಕು; ನೀವು ಬಹಿರ್ದೆಶೆಗೆ ಹೋದಾಗ ಆ ಸಲಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.


ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು