Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಡೆಯನಾದ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:1
16 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವೆ, ನಿನ್ನ ಮೂಕತನವನ್ನು ಕಳೆದುಕೊಂಡು ಮಾತಾಡುವೆ; ಹೀಗೆ ನೀನು ಅವರಿಗೆ ಗುರುತಾಗುವೆ. ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


“ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖವಾಗಿ ಅದನ್ನು ಕುರಿತ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ:


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;


ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.


ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


“ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.


ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?


“ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು