Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:13 - ಕನ್ನಡ ಸತ್ಯವೇದವು C.L. Bible (BSI)

13 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:13
29 ತಿಳಿವುಗಳ ಹೋಲಿಕೆ  

ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಜಾನುವಾರುಗಳನ್ನೂ ನಿನ್ನಿಂದ ನಿರ್ಮೂಲಮಾಡುವೆನು.


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ತೇಮಾನ್ ನಾಡೇ, ನಿನ್ನ ಶೂರರು ದಿಗ್ಭ್ರಾಂತರಾಗುವರು; ಏಸಾವಿನ ಪ್ರಾಂತ್ಯದಲ್ಲಿ ಎಲ್ಲರೂ ಹತರಾಗುವರು.


ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


“ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಎಲೀಫಜನಿಗೆ ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್, ಎಂಬ ಐದು ಮಕ್ಕಳು.


“ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.


ಯೋಬಾಬನು ಸತ್ತ ಮೇಲೆ ತೇಮಾನೀಯರ ನಾಡಿನವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.


“ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.


ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.


ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೆ ತರುತ್ತಿದ್ದ ವ್ಯಾಪಾರಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು