Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:17 - ಕನ್ನಡ ಸತ್ಯವೇದವು C.L. Bible (BSI)

17 ಅವರೆಲ್ಲರನ್ನು ಬಹಳವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವೆನು, ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿತೀರಿಸುವೆನು; ಹೀಗೆ ಪ್ರತೀಕಾರಮಾಡಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:17
9 ತಿಳಿವುಗಳ ಹೋಲಿಕೆ  

ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸದೆ ಬಿಡೆನು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.


ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II


ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು