Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:5 - ಕನ್ನಡ ಸತ್ಯವೇದವು C.L. Bible (BSI)

5 ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “‘ನಾನು ರಬ್ಬಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:5
18 ತಿಳಿವುಗಳ ಹೋಲಿಕೆ  

ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ ಜುದೇಯದಲ್ಲಿ ಕೋಟೆಕೊತ್ತಲಗಳಿಂದ ಕೂಡಿದ ಜೆರುಸಲೇಮಿಗೂ ಆ ಖಡ್ಗ ಬರುವುದಕ್ಕೆ ದಾರಿಗಳನ್ನು ಮಾಡು.


ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅರಮನೆ ಇದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.


ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.


ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಬಯಲು ಭೂಮಿಯಲ್ಲಿನ ಅವರ ಕುವರಿಯರು ಖಡ್ಗದಿಂದ ಹತರಾಗುವರು; ನಾನೇ ಸರ್ವೇಶ್ವರ ಎಂದು ಎಲ್ಲರಿಗೂ ಗೊತ್ತಾಗುವುದು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.


ಈ ವಿಷಯದಲ್ಲಿ ಯೆಜೆಕಿಯೇಲನು ನಿಮಗೆ ಮುಂಗುರುತಾಗಿರುವನು. ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.


ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು.


ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ಸಮುದ್ರತೀರದಲ್ಲಿರುವ ಆ ಪ್ರಾಂತ್ಯವು ಹುಲ್ಲುಗಾವಲಾಗುವುದು; ಕುರುಬರ ಗುಡಿಸಲಾಗುವುದು, ಕುರಿಗಳ ದೊಡ್ಡಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು