Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:6 - ಕನ್ನಡ ಸತ್ಯವೇದವು C.L. Bible (BSI)

6 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆಹೊಡೆದು ಕಾಲಿನಿಂದ ನೆಲವನ್ನು ಬಡಿದು ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಗತಿಗೆ ಹಿಗ್ಗಿಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:6
17 ತಿಳಿವುಗಳ ಹೋಲಿಕೆ  

“ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.


ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.


ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;


ಸರ್ವೇಶ್ವರನಾದ ದೇವರು ನುಡಿದದ್ದು : “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ; ಎಡವಿದರೆ ಮನೋಲ್ಲಾಸ ಪಡಬೇಡ.


ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”


ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು