Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:1 - ಕನ್ನಡ ಸತ್ಯವೇದವು C.L. Bible (BSI)

1 ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ [ಒಂದಾನೊಂದು] ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇಶ ಭ್ರಷ್ಟರಾಗಿದ್ದ ಹನ್ನೊಂದನೇ ವರ್ಷದ ತಿಂಗಳ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹನ್ನೊಂದನೆಯ ವರ್ಷ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:1
14 ತಿಳಿವುಗಳ ಹೋಲಿಕೆ  

ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ,


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.


ಅವರೆಲ್ಲರನ್ನು ಬಹಳವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವೆನು, ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು.


ಎಫ್ರಯಿಮಿನ ಮಕ್ಕಳು ಬೇಟೆಗೆ ಗುರಿ ಆದವರಂತೆ ಕಾಣಿಸುತ್ತಾರೆ. ಎಫ್ರಯಿಮ್ ತನ್ನ ಪುತ್ರರನ್ನು ವಧ್ಯಸ್ಥಾನಕ್ಕೆ ಕರೆದೊಯ್ಯಬೇಕಾಗುವುದು.


ವಿನಾಶದಿನದೊಳು ಮುಳುಗಿಹೋಗುವುವು ಸಮುದ್ರದೊಳು ನಿನ್ನ ಆಸ್ತಿ, ನಿನ್ನ ದಿನಸು, ನಿನ್ನ ಸರಕುಗಳು ನಿನ್ನ ನಾವಿಕರು, ಅಂಬಿಗರು, ಕಂಡಿ ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ಸೈನಿಕರೆಲ್ಲರು, ನಿನ್ನ ಸಿಬ್ಬಂದಿಯೆಲ್ಲವು.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸದರು -


ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು