Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:10 - ಕನ್ನಡ ಸತ್ಯವೇದವು C.L. Bible (BSI)

10 ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ದೂಳು ನಿನ್ನನ್ನು ಮುಸುಕುವದು; ಒಡಕುಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಲುಗಳೊಳಗೆ ನುಗ್ಗುವಾಗ ರಾಹುತ, ಚಕ್ಕಡಿಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನ್ನನ್ನು ಮುಚ್ಚಿಬಿಡುವದು. ಅವರ ರಾಹುತರ, ಚಕ್ಕಡಿಗಳ, ರಥಗಳ ಶಬ್ದದಿಂದ ನಿನ್ನ ಗೋಡೆಗಳು ನಡುಗುವವು. ಕೋಟೆಗೋಡೆಗಳು ಕೆಡವಲ್ಪಡುವದರಿಂದ ಅವರು ನಗರದೊಳಗೆ ನುಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:10
11 ತಿಳಿವುಗಳ ಹೋಲಿಕೆ  

ನಡುಗುವುವು ಸಮೀಪದ ಪ್ರದೇಶಗಳು ಆ ನಾವಿಕರ ಕೂಗಾಟಕೆ.


ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?


ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.


ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು


ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.


ತನ್ನ ಭಿತ್ತಿಭೇದಕಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೊತ್ತಲಗಳನ್ನು ಒಡೆದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು