Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲಪ್ರಭುಗಳು ತಮ್ಮ ಸಿಂಹಾಸನಗಳಿಂದಿಳಿದು ನಿಲುವಂಗಿಗಳನ್ನು ತೆಗೆದುಹಾಕಿ ಬೂಟೇದಾರಿಯ ವಸ್ತ್ರಗಳನ್ನು ಕಿತ್ತೆಸೆದು ತತ್ತರವನ್ನೇ ಹೊದ್ದುಕೊಂಡು ನೆಲದ ಮೇಲೆ ಕುಕ್ಕರಿಸಿ ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿ ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:16
32 ತಿಳಿವುಗಳ ಹೋಲಿಕೆ  

ಹೌದು, ಬಹುರಾಷ್ಟ್ರಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಳಿಸುವಾಗ ಅವರು ನಿನ್ನ ದುರ್ಗತಿಯನ್ನು ನೆನೆಸಿ ಭಯಭ್ರಾಂತರಾಗುವರು; ನಿನ್ನ ಪತನದಿಂದ ಪ್ರತಿಯೊಬ್ಬನು ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವು ನಡುಗುವನು.”


ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.


“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II


ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


ಖೈದಿಯಾಗಿ ಬಿದ್ದಿರುವ ಸಿಯೋನ್ ಕನ್ಯೆಯೆ, ಕಿತ್ತುಬಿಡು ಬಂಧನವನು ನಿನ್ನ ಕುತ್ತಿಗೆಯಿಂದ ಸಿಂಹಾಸನಾರೂಢಳಾಗು ಜೆರುಸಲೇಮೆ ಝಾಡಿಸಿ ಎದ್ದುನಿಂತು ದುಂಬುಧೂಳಿನಿಂದ!


“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.


ತೊಡಿಸುವೆನು ಅವನ ವೈರಿಗಳಿಗೆ ಲಜ್ಜಾಕವಚವನು I ಮುಡಿಸುವೆನು ಅವನಿಗಾದರೋ ಪ್ರಜ್ವಲ ಕಿರೀಟವನು” II


ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II


ಶಪಿಸುವುದೆಂದರೆ ಅವನಿಗೆ ಉಡಿಗೆತೊಡಿಗೆಯಂತೆ I ಇಳಿಯಲಿ ಅದೀಗ ಅವನ ದೇಹಕೆ ನೀರಿನಂತೆ I ಸೇರಲಿ ಅದೀಗ ಅವನ ಕೀಲಿಗೆ ಎಣ್ಣೆಯಂತೆ II


ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.


ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.


ಅದು ಹೇಗೆ ನುಚ್ಚುನೂರಾಗಿದೆ ! ಆ ಜನರು ಕಿರಿಚಿಕೊಳ್ಳುತ್ತಿದ್ದಾರೆ ! ಇಗೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ. ನೆರೆಹೊರೆಯವರು ಅಣಕಿಸುವುದಕ್ಕೂ ಬೆಚ್ಚಿಬೀಳುವುದಕ್ಕೂ ಆಸ್ಪದ ಆಗಿದೆ.” ಸರ್ವೇಶ್ವರ ಹೀಗೆನ್ನುತ್ತಾರೆ :


ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.


ನಿನ್ನನ್ನು ಪೂರ್ತಿಯಾಗಿ ಧ್ವಂಸಮಾಡುವೆನು; ನೀನು ಇಲ್ಲವಾಗುವೆ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಆ ವೃಕ್ಷ ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆ; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ, ನದಿಯ ಶಾಖೆಗಳನ್ನು ತಡೆದುಬಿಟ್ಟೆ; ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆ. ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು