Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:8 - ಕನ್ನಡ ಸತ್ಯವೇದವು C.L. Bible (BSI)

8 ಅವನು ಬಯಲು ಭೂಮಿಯಲ್ಲಿ ನಿನ್ನ ಕುವರಿಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧ ಒಡ್ಡುಕಟ್ಟಿ, ದಿಬ್ಬಹಾಕಿ, ಗುರಾಣಿಯೆತ್ತಿರುವವರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಬೈಲುಭೂವಿುಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ ದಿಬ್ಬಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೆಬೂಕದ್ನೆಚ್ಚರನು ನಿನ್ನ ಹೆಣ್ಣುಮಕ್ಕಳನ್ನು (ಚಿಕ್ಕ ಪಟ್ಟಣಗಳನ್ನು) ಕೊಲ್ಲುವನು. ಅವನು ಬುರುಜುಗಳನ್ನು ಕಟ್ಟಿ ನಿನ್ನ ನಗರವನ್ನು ಧಾಳಿ ಮಾಡುವನು. ನಿನ್ನ ನಗರದ ಸುತ್ತಲೂ ಮಣ್ಣಿನ ಮಾರ್ಗ ಮಾಡುವನು. ಕೋಟೆಗೋಡೆಯ ತನಕ ರಸ್ತೆಯನ್ನು ತಯಾರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:8
9 ತಿಳಿವುಗಳ ಹೋಲಿಕೆ  

ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.


ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.


ಯೋವಾಬನ ಕಡೆಯವರು ಅಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿದರು. ಅದರ ಹೊರಗೋಡೆಯ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯ ಕೆಳಗೆ ಅಗೆಯುತ್ತಾ ಅದನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.


ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,


ಬಯಲು ಭೂಮಿಯಲ್ಲಿನ ಅವರ ಕುವರಿಯರು ಖಡ್ಗದಿಂದ ಹತರಾಗುವರು; ನಾನೇ ಸರ್ವೇಶ್ವರ ಎಂದು ಎಲ್ಲರಿಗೂ ಗೊತ್ತಾಗುವುದು.”


ತನ್ನ ಭಿತ್ತಿಭೇದಕಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೊತ್ತಲಗಳನ್ನು ಒಡೆದುಬಿಡುವನು.


“ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು