Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:18 - ಕನ್ನಡ ಸತ್ಯವೇದವು C.L. Bible (BSI)

18 ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದದರಿಂದಲೂ ಅಪರಿವಿುತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ ಹೆಲ್ಬೋನಿನ ದ್ರಾಕ್ಷಾರಸವನ್ನೂ ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದಮಸ್ಕವೂ ನಿನ್ನ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಬೋನಿನ ದ್ರಾಕ್ಷಾರಸವನ್ನು ಮತ್ತು ಉಣ್ಣೆಯನ್ನು ಆ ವಸ್ತುಗಳಿಗಾಗಿ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:18
9 ತಿಳಿವುಗಳ ಹೋಲಿಕೆ  

ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


“ವೆದಾನಿನವರೂ, ಯಾವಾನಿನವರೂ ಉಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸುತ್ತಿದ್ದರು. ಉಕ್ಕು, ಬಜೆ, ಲವಂಗ, ಚಕ್ಕೆಗಳು ನಿನಗೆ ಆಮದಾಗುತ್ತಿದ್ದವು.


ಅಪಾರ ಐಶ್ವರ್ಯದಿಂದ, ವಾಣಿಜ್ಯ ದಿನಸುಗಳಿಂದ ನೀನು ತುಂಬಿಸಿದೆ ಬಹುರಾಷ್ಟ್ರಗಳನು, ಸಮೃದ್ಧಿಗೊಳಿಸಿದೆ ಭೂರಾಜರನು. ಈಗಾಗಿವೆ ಸಮುದ್ರದ ಪಾಲು ಆ ಸರಕು ಸಾಮಗ್ರಿಗಳೆಲ್ಲವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು