Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಟೈರ್‍ನಗರ ಕುರಿತ ಶೋಕಗೀತೆಯೊಂದನ್ನು ಹಾಡಿ, ಹೀಗೆಂದು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕಗೀತವನ್ನೆತ್ತು, ಅದಕ್ಕೆ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:2
12 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ!


“ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”


ರೋಧಿಸುವರು, ಪ್ರಲಾಪಿಸುವರು, ಹಾಡುವರು ಶೋಕಗೀತೆಯನ್ನು; ಕಡಲ ನಡುವೆ ಬಿಕೋ ಎನ್ನುವ ಟೈರನ್ನು ಏತಕೆ ಹೋಲಿಸೋಣ? ಎಂದು.


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ಮತ್ತೊಂದು ವಾಣಿ:


ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು