Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:23 - ಕನ್ನಡ ಸತ್ಯವೇದವು C.L. Bible (BSI)

23 ಹಾರಾನ್ ಕನ್ನೆ, ಏದೆನ್ ಸ್ಥಳಗಳವರು ಹಾಗೂ ಶೆಬ, ಅಸ್ಸೀರಿಯಾ, ಕಿಲ್ಮದ್ ಪ್ರಾಂತ್ಯಗಳ ವರ್ತಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಾರಾನ್ ಕನ್ನೆ ಎದೆನ್ ಸ್ಥಳಗಳವರೂ ಶೆಬ ಅಶ್ಶೂರ್‍ಕಿಲ್ಮದ್ ಪ್ರಾಂತಗಳ ವರ್ತಕರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:23
22 ತಿಳಿವುಗಳ ಹೋಲಿಕೆ  

ನನ್ನ ತಂದೆತಾತಂದಿರು ಗೋಜಾನ್, ಖಾರನ್, ರೆಚೆಫ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.


ಅಂತೆಯೇ ಅವನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ವಾಸಮಾಡಿದನು; ಅವನ ತಂದೆಯ ಮರಣಾನಂತರ ದೇವರು ಅವನನ್ನು ನೀವು ವಾಸಮಾಡುತ್ತಿರುವ ಈ ನಾಡಿಗೆ ಕರೆತಂದರು.


ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.


ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು.


ಇವರೊಡನೆ ಕೂಡಿಕೊಂಡಿಹ ಅಸ್ಸೀರ್ಯರು I ಲೋಟನ ವಂಶಕ್ಕೆ ಭುಜಬಲವಾಗಿಹರು II


ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.


ಆದರೂ ಕೇನ್ಯರು ಕೂಡ ನಾಶವಾಗುವರು. ಅಶ್ಯೂರ್ಯರು ನಿಮ್ಮನ್ನು ಸೆರೆ ಹಿಡಿಯಲು ಎಷ್ಟು ಕಾಲ ತಾನೆ ಹಿಡಿಯುವುದು?”


ಆ ರಾತ್ರಿ ಯಕೋಬನು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ‘ಯಬ್ಬೋಕ್’ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.


ಯೊಕ್ಷಾನನು ಶೆಬಾ, ದೆದಾನ್ ಎಂಬವರನ್ನು ಪಡೆದನು. ಅಶ್ಯೂರ್ಯರು, ಲೆಟೂಶ್ಯರೂ ಲೆಯುಮ್ಯರು ದೆದಾನನಿಂದ ಹುಟ್ಟಿದರು.


ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು.


ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.


ನಿನ್ನ ವ್ಯಾಪಾರಿಗಳಾಗಿ ಉತ್ತಮಾಂಬರ ಕಸೂತಿಯ ಊದ ನಿಲುವಂಗಿ ಮೊದಲಾದ ಮಾಲುಗಳನ್ನೂ ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.


“ಅಸ್ಸೀರಿಯ ಮತ್ತು ಅದರ ಜನತೆ ಯಾವಾಗಲು ಅಲ್ಲಿರುವುವು; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು.


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


ಓಬಾಲ್, ಅಬೀಮಯೇಲ್, ಶೆಬಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು