Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:30 - ಕನ್ನಡ ಸತ್ಯವೇದವು C.L. Bible (BSI)

30 ತಮ್ಮ ತಮ್ಮ ಹಡಗುಗಳಿಂದಿಳಿದು, ನೆಲದ ಮೇಲೆ ನಿಂತು. ತಲೆಗೆ ದೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನ ನಿವಿುತ್ತ ದನಿಗೈದು ದುಃಖದಿಂದರಚಿ ತಲೆಗೆ ದೂಳೆರಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:30
15 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು,


ಈ ವಿಷಯವನ್ನು ಗಾತ್ ಊರಿನವರಿಗೆ ತಿಳಿಸಬೇಡಿ; ಅಳಲೂಬೇಡಿ. ಬೇತ್ಲೆಯಪ್ರದಲ್ಲಿ, ಧೂಳಿನಲ್ಲಿ ಬಿದ್ದು ಹೊರಳಾಡಿ.


‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು