Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:36 - ಕನ್ನಡ ಸತ್ಯವೇದವು C.L. Bible (BSI)

36 ನಿನ್ನ ನೋಡಿ ಸಿಳ್ಳುಹಾಕುವರು ರಾಷ್ಟ್ರಗಳ ವರ್ತಕರು. ನಾಶವಾದೆ ನೀನು ಪೂರ್ತಿಯಾಗಿ, ಇಲ್ಲವಾದೆ ಇನ್ನೆಂದಿಗು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು ಆಶ್ಚರ್ಯದಿಂದ ಸಿಳ್ಳು ಹಾಕಿದರು. ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನುಂಟುಮಾಡಿತು. ಯಾಕೆಂದರೆ ನಿನ್ನ ಕಥೆ ಮುಗಿಯಿತು. ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:36
14 ತಿಳಿವುಗಳ ಹೋಲಿಕೆ  

ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ನಿನ್ನನ್ನು ಪೂರ್ತಿಯಾಗಿ ಧ್ವಂಸಮಾಡುವೆನು; ನೀನು ಇಲ್ಲವಾಗುವೆ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II


ನಾನು ನಿನ್ನನ್ನು ಬೋಳುಬಂಡೆಮಾಡುವೆನು; ನೀನು ಬಲೆಗಳಿಗೆ ಹಾಸುಬಂಡೆಯಾಗುವೆ; ಇನ್ನು ನೀನು ಪುನಃ ನಿರ್ಮಾಣ ಹೊಂದಲಾರೆ; ಸರ್ವೇಶ್ವರನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.


“ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.


ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸದರು -


ನಿನ್ನೀ ಗತಿ ನೋಡಿ ಬೆರಗಾದರು ನಿನ್ನನ್ನರಿತ ರಾಷ್ಟ್ರಗಳು ಪೂರ್ತಿಯಾಗಿ ನೀ ಧ್ವಂಸವಾದೆ, ಇಲ್ಲವಾದೆ ಇನ್ನೆಂದಿಗೂ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು