Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:8 - ಕನ್ನಡ ಸತ್ಯವೇದವು C.L. Bible (BSI)

8 ನಿನಗೆ ಹುಟ್ಟುಹಾಕುವರು ಸಿದೋನಿನವರು, ಅರ್ವಾದಿನವರು. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಚೀದೋನಿನವರೂ ಅರ್ವಾದಿನವರೂ ನಿನಗೆ ಹುಟ್ಟುಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಚೀದೋನ್ ಮತ್ತು ಅರ್ವಾದಿನ ಜನರು ನಿನ್ನ ಹಡಗುಗಳಿಗೆ ಹುಟ್ಟುಹಾಕುವವರಾಗಿದ್ದರು. ತೂರೇ, ನಿನ್ನ ಜ್ಞಾನಿಗಳು ಹಡಗುಗಳನ್ನು ನಡಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸೀದೋನಿನ ಮತ್ತು ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವವರಾಗಿದ್ದಾರೆ. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:8
13 ತಿಳಿವುಗಳ ಹೋಲಿಕೆ  

ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮೇಣ ಈ ಕಾನಾನ್ ಕುಲಗಳವರು ಹರಡಿಕೊಂಡರು.


ಹೀರಾಮನು ಸಮುದ್ರಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.


ಅರ್ವಾದಿನವರೂ ನಿನ್ನ ಸೈನಿಕರೂ ಸುತ್ತುಮುತ್ತಲು ನಿನ್ನ ತೆನೆಗೋಡೆಗಳಲ್ಲಿ ನಿಂತಿದ್ದರು; ಗಮ್ಮಾದ್ಯರು ನಿನ್ನ ಕೊತ್ತಲಗಳಲ್ಲಿ ಕಾವಲಾಗಿದ್ದರು; ಎಲ್ಲರು ತಮ್ಮ ಖೇಡ್ಯಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳಿಗೆ ನೇತುಹಾಕಿ ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದ್ದರು.


ನಡುಗುವುವು ಸಮೀಪದ ಪ್ರದೇಶಗಳು ಆ ನಾವಿಕರ ಕೂಗಾಟಕೆ.


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.


ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಅರ್ವಾದಿಯ, ಚೆಮಾರಿಯ ಮತ್ತು ಹಮಾತಿನ ಜನರ ಮೂಲಪಿತೃ ಕಾನಾನನು.


“ನರಪುತ್ರನೇ, ನೀನು ಸಿದೋನಿಗೆ ಅಭಿಮುಖನಾಗಿ ಅದರ ಬಗ್ಗೆ ಹೀಗೆ ನುಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು