Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:13 - ಕನ್ನಡ ಸತ್ಯವೇದವು C.L. Bible (BSI)

13 ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:13
25 ತಿಳಿವುಗಳ ಹೋಲಿಕೆ  

ಹುಟ್ಟಿದ ದಿನದಿಂದ ಅಪರಾಧವೆಸಗುವವರೆಗೆ ನಿರ್ದೋಷವಾಗಿತ್ತು ನಿನ್ನ ನಡತೆ.


ಕೈಕೆಲಸದ ವಸ್ತುಗಳು ನಿನಗೆ ಅಪಾರವಾಗಿದ್ದವು; ಆದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಮಡಿ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿಯುತ್ತಿದ್ದರು.


ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು.


ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು.


‘ಓ ವೇಶ್ಯೆಯೇ, ಮರೆತಿಹರು, ನೋಡು, ಜನರು ನಿನ್ನನು; ಎಂದೇ ತೆಗೆದುಕೋ ಕೈಯಲಿ ಕಿನ್ನರಿಯನು: ನುಡಿಸು ಇಂಪಾಗಿ ನಿನ್ನ ವಾದ್ಯವನು; ಹಾಡು ಅನೇಕಾನೇಕ ಗೀತಗಳನು; ಆಗಲಾದರೂ ನೆನಸಿಕೊಳ್ಳಲಿ ಜನರು ನಿನ್ನನು.’


ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.


ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ, ಮುಖ್ಯ ಮುಖ್ಯ ಸುಗಂಧದ್ರವ್ಯ, ಸಮಸ್ತ ಅಮೂಲ್ಯರತ್ನ, ಈ ವಸ್ತುಗಳನ್ನು ನಿನಗಾಗಿ ತರುತ್ತಿದ್ದರು.


ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.


ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು.


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.


ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.


ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಲ್ಲ ಶುದ್ಧ ಕನಕದೊಡನೆ ಅದನು ತೂಕಮಾಡಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು