Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:17 - ಕನ್ನಡ ಸತ್ಯವೇದವು C.L. Bible (BSI)

17 ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:17
28 ತಿಳಿವುಗಳ ಹೋಲಿಕೆ  

ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ಹೌದು, ಬಹುರಾಷ್ಟ್ರಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಳಿಸುವಾಗ ಅವರು ನಿನ್ನ ದುರ್ಗತಿಯನ್ನು ನೆನೆಸಿ ಭಯಭ್ರಾಂತರಾಗುವರು; ನಿನ್ನ ಪತನದಿಂದ ಪ್ರತಿಯೊಬ್ಬನು ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವು ನಡುಗುವನು.”


‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.


ಹೀಗೆ ನಾನು ನಾಡಿನೊಳಗಿಂದ ಲಂಪಟತನವನ್ನು ತೊಲಗಿಸುವೆನು; ಇದರಿಂದ ಸಮಸ್ತ ಮಹಿಳೆಯರಿಗೂ ನಿಮ್ಮ ಲಂಪಟತನವನ್ನೂ ಅನುಸರಿಸಬಾರದೆಂಬ ಬುದ್ಧಿ ಬರುವುದು.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಅಹಂಕಾರವಿದ್ದಲ್ಲಿ ಅವಮಾನ; ಸ್ವಾರ್ಥ ನಿಗ್ರಹವಿದ್ದಲ್ಲಿ ಸುಜ್ಞಾನ.


ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II


ಜಾರು ನೆಲದಲಿ ಆ ಜನರನು ನೀ ನಿಲ್ಲಿಸಿರುವೆ I ನಿಶ್ಚಯವಾಗಿ ನೀ ಬೀಳಿಸಿ ಅವರನು ನಾಶಮಾಡುವೆ II


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.


ಸಮುದ್ರದ್ವಾರದಲ್ಲಿ ವಾಸಿಸುವ ನಗರಿಯೇ, ರಾಷ್ಟ್ರಗಳಿಗೂ ಹಲವಾರು ದ್ವೀಪಗಳಿಗೂ ನಡುವೆ ವ್ಯಾಪಾರ ನಡೆಸುವವಳೇ, ಸರ್ವೇಶ್ವರನಾದ ದೇವರು ಹೇಳುವುದನ್ನು ಕೇಳು: “ಟೈರ್ ನಗರಿಯೇ, ‘ನಾನೋರ್ವ ನಾವೆ,’ ‘ಸರ್ವಾಂಗ ಸುಂದರಿ ನಾನಾಗಿರುವೆ,’ ಎಂದು ಕೊಚ್ಚಿಕೊಂಡೆಯಲ್ಲವೆ?


ನಿನ್ನ ನೆಲೆಯಿರುವುದು ಸಮುದ್ರಗಳ ನಡುವೆ ನಿನ್ನ ನಿರ್ಮಿಸಿಹರು ಸರ್ವಾಂಗ ಸುಂದರಿಯಾಗಿಯೇ!


ಹುಟ್ಟಿದ ದಿನದಿಂದ ಅಪರಾಧವೆಸಗುವವರೆಗೆ ನಿರ್ದೋಷವಾಗಿತ್ತು ನಿನ್ನ ನಡತೆ.


ದುರ್ಗದಂತೆ ಎತ್ತರವಾಗಿರುವ ಅದರ ಕೋಟೆಕೊತ್ತಲಗಳನ್ನು ಕೆಳಕ್ಕೆ ಕೆಡವಿ ನೆಲಸಮಮಾಡುವರು. ಅದು ಧೂಳು ಪಾಲಾಗುವುದು.


ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು