Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:18 - ಕನ್ನಡ ಸತ್ಯವೇದವು C.L. Bible (BSI)

18 ಅಪಾರ ಅಪರಾಧಗಳಿಂದ, ಅನ್ಯಾಯ ವ್ಯಾಪಾರಗಳಿಂದ ನಿನ್ನಲ್ಲಿನ ಪವಿತ್ರಾಲಯ ಅಶುದ್ಧವಾಯಿತು ನಿನ್ನಿಂದ. ಎಂದೇ, ನಾ ಬರಮಾಡಿದೆ ಬೆಂಕಿಯನು ನಿನ್ನೊಳಗಿಂದ ನೋಡ್ವರೆಲ್ಲರ ಮುಂದೆ ಸುಟ್ಟು ಭಸ್ಮ ಮಾಡಿತು ನಿನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಅಪಾರವಾದ ಅಪರಾಧಗಳಿಂದಲೂ ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದಿ; ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿಮಾಡಿಬಿಟ್ಟೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ಅನೇಕ ತಪ್ಪುಗಳನ್ನು ಮಾಡಿದೆ. ನೀನು ಮೋಸಗಾರನಾದ ವ್ಯಾಪಾರಿ. ಇದರಿಂದಾಗಿ ನೀನು ಪವಿತ್ರಸ್ಥಳವನ್ನು ಹೊಲೆ ಮಾಡಿರುವಿ. ಆದ್ದರಿಂದ ನಿನ್ನೊಳಗೆ ಬೆಂಕಿಯನ್ನು ಬರಮಾಡಿ ಅದು ನಿನ್ನನ್ನು ದಹಿಸುವಂತೆ ಮಾಡಿದೆನು. ನೀನು ಸುಟ್ಟ ಬೂದಿಯಾದೆ. ಈಗ ಎಲ್ಲರೂ ನಿನ್ನ ಲಜ್ಜಾತನವನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿಬಿಟ್ಟಿತು. ನೋಡುವವರೆಲ್ಲರ ಮುಂದೆ ನಿನ್ನನ್ನು ಬೂದಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:18
17 ತಿಳಿವುಗಳ ಹೋಲಿಕೆ  

ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ನೀ ಪಾಪಿಯಾದೆ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರಗಳು ತುಂಬಿಕೊಂಡದ್ದರಿಂದ. ಎಂದೇ, ಹೊಲಸೆಂಬಂತೆ ನಿನ್ನ ತಳ್ಳಿಬಿಟ್ಟೆ ದೇವರ ಬೆಟ್ಟದಿಂದ ಕಿತ್ತೆಸೆದುಬಿಟ್ಟೆ ಕೆಂಡದ ನಡು ಮಡುವಿನ ನೆಲೆಯಿಂದ ನೆರಳು ನೀಡುವ ಕೆರೂಬಿಯೇ ಎಸೆಯಿತು ನಿನ್ನನ್ನು ಅಲ್ಲಿಂದ.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದು, ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಬರುವ ಲಾಭವಾದರೂ ಏನು?


ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


ಆದಕಾರಣ ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಕೆರಿಯೋತಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಸೈನಿಕರ ಆರ್ಭಟ, ರಣಕಹಳೆಗಳ ಗರ್ಜನೆ, ಯುದ್ಧದ ಕೋಲಾಹಲ - ಇವುಗಳ ಮಧ್ಯೆ ಮೋವಾಬಿನ ಜನರು ಮಡಿಯುವರು.


ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯಲ್ಲಿ ಹಾಕಿ ಸುಡು; ಅವುಗಳಿಂದ ಬೆಂಕಿ ಹೊರಟು ಇಸ್ರಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”


ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”


ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.


ಹುಟ್ಟಿದ ದಿನದಿಂದ ಅಪರಾಧವೆಸಗುವವರೆಗೆ ನಿರ್ದೋಷವಾಗಿತ್ತು ನಿನ್ನ ನಡತೆ.


ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು.


ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು