Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:2
40 ತಿಳಿವುಗಳ ಹೋಲಿಕೆ  

ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II


ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.


ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.


ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು?


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸದರು -


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಫರೋಹನು, - ‘ಈ ನದಿ ನನ್ನದೇ, ನಾನೇ ಮಾಡಿಕೊಂಡೆ’ ಎಂದುಕೊಂಡನು. ಈ ಕಾರಣ ಈಜಿಪ್ಟ್ ದೇಶ ಹಾಳುಪಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ಅವನು ತನ್ನ ಪೂರ್ವಜರ ದೇವರನ್ನಾಗಲಿ, ಮಹಿಳೆಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನೇ ಆಗಲಿ, ಲಕ್ಷಿಸನು. ಎಲ್ಲ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.


ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರಬಂದು, ‘ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು,’ ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು