Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:22 - ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಚೀದೋನೇ, ನಾನು ನಿನಗೆ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೀದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:22
32 ತಿಳಿವುಗಳ ಹೋಲಿಕೆ  

ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನೆವೆ, ನಿನಗೆ ನಾ ವಿರೋಧಿಯಾಗಿರುವೆನು ಬಿಚ್ಚಿ ಮುಖದ ಮೇಲೆತ್ತುವೆನು ನಿನ್ನ ನೆರಿಗೆಗಳನು ಜನಾಂಗಗಳಿಗೆ ತೋರಿಸುವೆನು ನಿನ್ನ ಬೆತ್ತಲೆತನವನು ರಾಜ್ಯಗಳಿಗೆ ಕಾಣಿಸುವೆನು ನಿನ್ನ ಅವಮಾನವನು.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ರಾಜನಾದ ಗೋಗನೇ,


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ಹೀಗೆ ನಾನು ಈಜಿಪ್ಟರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ತನಕ, ಹೌದು, ಸುಡಾನ್ ಎಲ್ಲೆಯವರೆಗೂ ಪೂರ್ತಿಯಾಗಿ ಹಾಳುಪಾಳುಮಾಡುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಆದುದರಿಂದ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಟೈರೇ, ಇಗೋ ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ವಿರುದ್ಧ ಎಬ್ಬಿಸುವೆನು.


ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.


ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.


ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಕಳವಳಗೊಳ್ಳಲಿ ಅವರು ಸತತವು ಲಜ್ಜೆಯಿಂದ I ಅವರಳಿದುಹೋಗಲಿ ಅವಮಾನ ನಿಂದೆಗಳಿಂದ II


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಸಿದೋನ್ ನಗರವೇ, ನಿನಗೆ ನಾಚಿಕೆಗೇಡು ! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು