Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:1 - ಕನ್ನಡ ಸತ್ಯವೇದವು C.L. Bible (BSI)

1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಹತ್ತನೆಯ ವರುಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:1
13 ತಿಳಿವುಗಳ ಹೋಲಿಕೆ  

ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:


ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು.


ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ,


ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:


ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು.


ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.


ಯೆರೆಮೀಯನು ತಹಪನೇಸಿನಲ್ಲಿರುವಾಗ ಸರ್ವೇಶ್ವರನ ಈ ವಾಣಿ ಕೇಳಿ ಬಂದಿತು:


ರಾಷ್ಟ್ರಗಳ ವಿಷಯವಾಗಿ ಸರ್ವೇಶ್ವರ ಸ್ವಾಮಿ ಪ್ರವಾದಿ ಯೆರೆಮೀಯನಿಗೆ ಅನುಗ್ರಹಿಸಿದ ವಾಣಿ ಇದು: ಈಜಿಪ್ಟನ್ನು ಕುರಿತ ವಾಣಿ:


“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ ಖಡ್ಗಹತರ ನಡುವೆ ಸೇರಿಹೋಗುವರು,” ಎಂಬುದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು