Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನ ಕಡೆಗೆ ಮುಖಮಾಡಿ ಅವನನ್ನು ಹಾಗು ಈಜಿಪ್ಟಿನವರೆಲ್ಲರನ್ನು ಕುರಿತು ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನ ಕಡೆಗೆ ಮುಖಮಾಡು. ಅವನಿಗೂ ಈಜಿಪ್ಟಿಗೂ ವಿರುದ್ಧವಾಗಿ ನನ್ನ ಪರವಾಗಿ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:2
17 ತಿಳಿವುಗಳ ಹೋಲಿಕೆ  

“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,


ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”


“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -


“ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖವಾಗಿ ಅದನ್ನು ಕುರಿತ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ:


“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:


“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,


ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ !


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ನಾನು ಸರ್ವೇಶ್ವರನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡೆ. ಸರ್ವೇಶ್ವರ ಯಾವ ರಾಷ್ಟ್ರಗಳ ಬಳಿಗೆ ನನ್ನನ್ನು ಕಳಿಸಿದರೋ, ಆ ಎಲ್ಲ ರಾಷ್ಟ್ರಗಳು ಅದರಿಂದ ಕುಡಿಯುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು