Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:21 - ಕನ್ನಡ ಸತ್ಯವೇದವು C.L. Bible (BSI)

21 “ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಿನದಲ್ಲಿ ನಾನು ಇಸ್ರಾಯೇಲ್‍ವಂಶಕ್ಕೆ ಕೊಂಬನ್ನು ಮೊಳೆಯಿಸಿ ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆ ದಿವಸದಲ್ಲಿ ಇಸ್ರೇಲ್ ವಂಶವನ್ನು ನಾನು ಬಲಪಡಿಸುವೆನು. ಯೆಹೆಜ್ಕೇಲನೇ, ನೀನು ಅವರೊಂದಿಗೆ ಮಾತನಾಡುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:21
21 ತಿಳಿವುಗಳ ಹೋಲಿಕೆ  

ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.


ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವೆ, ನಿನ್ನ ಮೂಕತನವನ್ನು ಕಳೆದುಕೊಂಡು ಮಾತಾಡುವೆ; ಹೀಗೆ ನೀನು ಅವರಿಗೆ ಗುರುತಾಗುವೆ. ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II


ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”


ಫರೋಹನು, - ‘ಈ ನದಿ ನನ್ನದೇ, ನಾನೇ ಮಾಡಿಕೊಂಡೆ’ ಎಂದುಕೊಂಡನು. ಈ ಕಾರಣ ಈಜಿಪ್ಟ್ ದೇಶ ಹಾಳುಪಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.


“ಆಗ ಈಜಿಪ್ಟಿನ ಸಕಲ ನಿವಾಸಿಗಳು, ‘ಇಸ್ರಯೇಲ್ ವಂಶದವರಿಗೆ ನಾವು ಬರೀ ದಂಟಿನ ಊರುಗೋಲಾದೆವು’ ಎಂದು ನಾಚಿಕೆಪಟ್ಟು ನಾನೇ ಸರ್ವೇಶ್ವರ ಎಂಬುದಾಗಿ ದೃಢಮಾಡಿಕೊಳ್ಳುವರು.


ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು