Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:11 - ಕನ್ನಡ ಸತ್ಯವೇದವು C.L. Bible (BSI)

11 ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಸೆರೆವಾಸದಲ್ಲಿರುವ ನಿನ್ನ ಸ್ವಜನರ ಬಳಿಗೆ ಹೋಗು. ಅವರು ಕೇಳಲಿ, ಕೇಳದಿರಲಿ, ನೀನು ಅವರಿಗೆ, ‘ದೇವರಾದ ಯೆಹೋವನು ಹೀಗೆ ಹೇಳುತ್ತಾನೆ’” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:11
20 ತಿಳಿವುಗಳ ಹೋಲಿಕೆ  

ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


“ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.


“ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.


“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.


“ನರಪುತ್ರನೇ, ಜನರನ್ನು ಸಂಭೋದಿಸಿ ಅವರಿಗೆ ಹೀಗೆ ನುಡಿ - “ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಆರಿಸಿ ನೇಮಿಸಿಕೊಂಡ ಕಾವಲುಗಾರನು


ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.


“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.


ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.


ನಿನ್ನ ಜನರು, “ಇದೇನು? ನಮಗೆ ತಿಳಿಸುವುದಿಲ್ಲವೆ?” ಎಂದು ನಿನ್ನನ್ನು ಕೇಳುವರು.


ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.


ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.


ಇತ್ತ ಸರ್ವೇಶ್ವರ ಮೋಶೆಗೆ, “ನೀನು ಕೂಡಲೆ ಬೆಟ್ಟದಿಂದ ಇಳಿದುಹೋಗು, ಈಜಿಪ್ಟಿನಿಂದ ನೀನು ಕರೆದುತಂದ ನಿನ್ನ ಜನರು ಕೆಟ್ಟುಹೋದರು.


ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


“ಹೀಗಿರಲು, ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳು ಪುನಃ ದ್ರೋಹಮಾಡಿ ನನ್ನನ್ನು ದೂಷಿಸಿದ್ದಾರೆ.


ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು