Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:23 - ಕನ್ನಡ ಸತ್ಯವೇದವು C.L. Bible (BSI)

23 ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನೆದ್ದು ಬೈಲುಸೀಮೆಗೆ ಹೊರಟುಹೋದಾಗ ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತದರ್ಶನವು ಆದಂತೆ ಆಹಾ, ಅಲ್ಲಿಯೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:23
18 ತಿಳಿವುಗಳ ಹೋಲಿಕೆ  

ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.


ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,


ಸಮುದಾಯದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರ ವಿರುದ್ಧ ಪ್ರತಿಭಟಿಸಲು ಸಭೆ ಸೇರಿದರು. ಅವರು ದೇವದರ್ಶನದ ಗುಡಾರದತ್ತ ನೋಡಿದಾಗ, ಮೇಘವೊಂದು ಅದನ್ನು ಆವರಿಸಿತು ಮತ್ತು ಸರ್ವೇಶ್ವರನ ತೇಜಸ್ಸು ಹೊಳೆಯಿತು.


ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.


ಆಗ ಇಗೋ, ಇಸ್ರಯೇಲಿನ ದೇವರ ಮಹಿಮಾದ್ಭುತ ದರ್ಶನವು ಬಯಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದ‍ನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.


ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು