Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:26 - ಕನ್ನಡ ಸತ್ಯವೇದವು C.L. Bible (BSI)

26 ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿನ್ನ ನಾಲಿಗೆಯು ಸೇದಿ ಹೋಗುವಂತೆ ಮಾಡುವೆನು. ನಿನಗೆ ಮಾತನಾಡಲು ಆಗದು. ಆದ್ದರಿಂದ ಅವರನ್ನು ಖಂಡಿಸಲು ಯಾರೂ ಇರುವದಿಲ್ಲ. ಯಾಕೆಂದರೆ ಆ ಜನರು ಯಾವಾಗಲೂ ನನ್ನ ವಿರುದ್ಧವಾಗಿ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:26
18 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವೆ, ನಿನ್ನ ಮೂಕತನವನ್ನು ಕಳೆದುಕೊಂಡು ಮಾತಾಡುವೆ; ಹೀಗೆ ನೀನು ಅವರಿಗೆ ಗುರುತಾಗುವೆ. ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.


ಅವನು ಈ ಮಾತನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ನಿಶ್ಶಬ್ದನಾದೆ.


“ಯಾರೂ ಪ್ರತಿಭಟಿಸದಿರಲಿ, ಯಾರೂ ಜನರನ್ನು ಖಂಡಿಸದಿರಲಿ. ನನ್ನ ಆಪಾದನೆ ಇರುವುದು, ಎಲೈ ಯಾಜಕರೇ, ನಿಮ್ಮ ಮೇಲೆಯೇ.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು