Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:12 - ಕನ್ನಡ ಸತ್ಯವೇದವು C.L. Bible (BSI)

12 ನಾನು ನದೀ ಶಾಖೆಗಳನ್ನು ಬತ್ತಿಸಿ, ದೇಶವನ್ನು ದುಷ್ಟರ ಕೈಗೆ ವಶಮಾಡಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಸರ್ವೇಶ್ವರನಾದ ನಾನೇ ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ನದೀಶಾಖೆಗಳನ್ನು ಬತ್ತಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಯೆಹೋವನಾದ ನಾನೇ ನುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:12
12 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.


ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು