Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಪತ್ರೋಸನ್ನು ಹಾಳುಮಾಡಿ ಚೋವನಿಗೆ ಬೆಂಕಿಯಿಕ್ಕಿ ನೋಪುರವನ್ನು ದಂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:14
17 ತಿಳಿವುಗಳ ಹೋಲಿಕೆ  

ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನೋ ಎಂಬ ನಗರದಲ್ಲಿನ ಅಮೋನ್ ದೇವತೆಯನ್ನು, ಫರೋಹನನ್ನು, ಈಜಿಪ್ಟನ್ನು, ಈಜಿಪ್ಟಿನ ದೇವತೆಗಳನ್ನೂ ಅಲ್ಲಿನ ಅರಸರನ್ನೂ ದಂಡಿಸುವೆನು. ಹೌದು, ಫರೋಹನನ್ನೂ ಅವನಲ್ಲಿ ನಂಬಿಕೆ ಇಟ್ಟವರನ್ನೂ ದಂಡಿಸುವೆನು.


ಕಡೆಗಣಿಸಿದರು ಈಜಿಪ್ಟಿನಲಿ ಮಾಡಿದ ಪವಾಡಗಳನು I ಸೋನ್ ಬಯಲು ಸೀಮೆಯಲಾತ ಮಾಡಿದ ಮಹತ್ಕಾರ್ಯಗಳನು II


ಆ ಈಜಿಪ್ಟ್ ದೇಶದೊಳು, ಸೋನ್ ಬಯಲು ಸೀಮೆಯೊಳು I ಆತನೆಸಗಿದ ಪವಾಡಗಳು ಪೂರ್ವಜರ ಇದಿರೊಳು II


“ನೀನು ತೇಬೆಸ್ಸಿಗಿಂತ ಸುಭದ್ರಳೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು. ಮಹಾನದಿ ಅದಕ್ಕೆ ಕೋಟೆಯಾಗಿತ್ತು. ಜಲಾಶಯವು ಅದರ ದುರ್ಗವಾಗಿತ್ತು.


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)


ಫರೋಹನ ಸಾಮಂತರಾಜರು ಚೊವನಿನಲ್ಲಿದ್ದಾರೆ. ಅವನ ರಾಯಭಾರಿಗಳು ಹಾನೇಸನ್ನು ತಲುಪಿದ್ದಾರೆ.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಾರತಿ ಎತ್ತುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲೆ ದೊಡ್ಡ ಗುಂಪಾಗಿ ನಿಂತಿದ್ದ ಹೆಂಗಸರು, ಹಾಗೂ ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದ ಎಲ್ಲ ಜನರು ಯೆರೆಮೀಯನಿಗೆ ಹೀಗೆಂದು ಉತ್ತರಕೊಟ್ಟರು:


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.


ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಈಜಿಪ್ಟಿಗೆ ರಕ್ಷಣಾ ಕೋಟೆಯಾದ ಪೆಲೂಸಿಯಮ್‍ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು.


ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಹೀಗೆ ನಾನು ಈಜಿಪ್ಟರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು