Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:24 - ಕನ್ನಡ ಸತ್ಯವೇದವು C.L. Bible (BSI)

24 ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಾಬಿಲೋನಿನ ರಾಜನ ಕೈಗಳನ್ನು ನಾನು ಬಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಬ್ದವು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:24
21 ತಿಳಿವುಗಳ ಹೋಲಿಕೆ  

ಸುಡಾನಿನ ಜನರೇ, ನೀವೂ ಸಹ ಕತ್ತಿಗೆ ತುತ್ತಾಗುವಿರಿ.


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು.


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.


ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?


ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: “ಬರಲಿವೆ ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ನರಳಾಡುವರು ಗಾಯಗೊಂಡವರು.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II


ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು I ತಗ್ಗಿಸಿದೆ ಎದುರಾಳಿಗಳನು ನನಗಧೀನ ಮಾಡಿಬಿಟ್ಟು II


ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.


ಆ ದೇಶವನ್ನು ನಾಶಪಡಿಸಲು ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಈಜಿಪ್ಟಿನ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.


“ನರಪುತ್ರನೇ, ನಾನು ಈಜಿಪ್ಟಿನ ಅರಸ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು