Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:14 - ಕನ್ನಡ ಸತ್ಯವೇದವು C.L. Bible (BSI)

14 ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀರಾವರಿಯ ಯಾವ ಮರಗಳೂ ತಮ್ಮ ನೀಳವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದಿರಲೆಂದೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ನಿಗುರಿಕೊಳ್ಳದಿರಲೆಂದೂ ಹೀಗಾಯಿತು; ಅವೆಲ್ಲಾ ಮರಣದ ಪಾಲಾಗುವವು, ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:14
21 ತಿಳಿವುಗಳ ಹೋಲಿಕೆ  

ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.


ಇದನ್ನು ಇಸ್ರಯೇಲರೆಲ್ಲರು ಕೇಳಿ, ಭಯಪಟ್ಟು, ಅಂಥ ದುಷ್ಕಾರ್ಯವನ್ನು ಮುಂದೆ ಮಾಡರು.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ.


ಬದಲಿಗೆ ಸರ್ವೇಶ್ವರ ಇವರಿಗಾಗಿ ಆಶ್ಚರ್ಯಕರವಾದ ಶಿಕ್ಷೆಯನ್ನು ಕಲ್ಪಿಸಿ ಅಂದರೆ ಭೂಮಿ ಬಾಯ್ದೆರೆದು ಇವರನ್ನು ಹಾಗೂ ಇವರಿಗಿರುವ ಸರ್ವಸ್ವವನ್ನು ನುಂಗಿಬಿಟ್ಟರೆ, ಇವರೆಲ್ಲರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಸರ್ವೇಶ್ವರನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು,” ಎಂದು ಹೇಳಿದನು.


ಅವರು ಸಜೀವರಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಇಳಿದುಬಿಟ್ಟರು. ಭೂಮಿ ಅವರನ್ನು ಮುಚ್ಚಿಕೊಂಡಿತು.


ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.


“ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ.


ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.


ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು