Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:18 - ಕನ್ನಡ ಸತ್ಯವೇದವು C.L. Bible (BSI)

18 “ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:18
20 ತಿಳಿವುಗಳ ಹೋಲಿಕೆ  

ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”


ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.


ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”


ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದ‍ನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.


ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.


ಕೇಡು ಬಗೆಯುವವರು ನನ್ನ ಪ್ರಾಣಕೆ I ಇಳಿದು ಹೋಗುವರು ಅಧೋಲೋಕಕೆ II


“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ನಿನ್ನ ಬಹುಪ್ರಜೆಯನ್ನು ಅತಿ ಭಯಾನಕ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು; ಈಜಿಪ್ಟ್ ಹೆಚ್ಚಳಪಡುವ ವಸ್ತುಗಳನ್ನೇ ಅವರು ಸೂರೆಮಾಡುವರು; ಅದರ ಜನ ನಿರ್ನಾಮವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು