Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:24 - ಕನ್ನಡ ಸತ್ಯವೇದವು C.L. Bible (BSI)

24 “ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಏಲಾಮು ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:24
29 ತಿಳಿವುಗಳ ಹೋಲಿಕೆ  

“ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ಏಲಾಮು ಮಲಗುವುದಕ್ಕೆ, ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತಮುತ್ತಲಿವೆ. ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳ ಏರ್ಪಾಡಾಗಿದೆ.


“ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.


ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.


ನನಗೆ ಯಾಜಕ ಸೇವೆಮಾಡುವುದಕ್ಕೆ ಅವರು ನನ್ನ ಸನ್ನಿಧಿಗೆ ಬರಕೂಡದು. ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು. ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ಏಲಾಮಿನ ಎಲ್ಲ ಅರಸರು, ಮೇದ್ಯರ ಎಲ್ಲ ಅರಸರು;


ಆ ದಿನಗಳಲ್ಲಿ ಬಾಬೆಲೋನಿನ ಅರಸ ಅಮ್ರಾಫೆಲನು, ಎಲ್ಲಸಾರಿನ ಅರಸ ಅರಿಯೋಕನು, ಎಲಾಮಿನ ಅರಸ ಕೆದೊರ್ಲಗೋಮರನು ಮತ್ತು ಗೋಯಿಮದ ಅರಸ ತಿದ್ಗಾಲನು - ಈ ನಾಲ್ವರು


ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.


ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.


ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರು. ಈ ಹೆಸರಿನ ಜನಾಂಗಗಳಿಗೆ ಇವರೇ ಮೂಲಪುರುಷರು.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”


ಈಜಿಪ್ಟೇ, ನೀನು ಸೌಂದರ್ಯದಲ್ಲಿ ಯಾರಿಗೆ ಕಡಿಮೆ? ಪಾತಾಳಕ್ಕೆ ಇಳಿದು ನೆಲಸು ಸುನ್ನತಿಹೀನರ ನಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು