Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:30 - ಕನ್ನಡ ಸತ್ಯವೇದವು C.L. Bible (BSI)

30 “ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಬಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:30
11 ತಿಳಿವುಗಳ ಹೋಲಿಕೆ  

ಪಡೆಪಡೆಯಾದ ಗೋಮೆರ್ಯರನ್ನು, ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಪಡೆಪಡೆಯಾದ ತೋಗರ್ಮದವರನ್ನು, ಹೀಗೆ ಅನೇಕಾನೇಕ ಜನಾಂಗಗಳನ್ನು ನಿನ್ನೊಂದಿಗೆ ಬರಮಾಡುವೆನು.


ಇಗೋ, ನಾನು ನಿನಗೆ ವಿರುದ್ಧನಾಗಿ, ನಿನ್ನನ್ನು ತಿರುಗಿಸಿ ಮುನ್ನಡೆಸಿ, ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,


ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹುಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವೆ.


“ನರಪುತ್ರನೇ, ನೀನು ಸಿದೋನಿಗೆ ಅಭಿಮುಖನಾಗಿ ಅದರ ಬಗ್ಗೆ ಹೀಗೆ ನುಡಿ -


ದೂರ - ಹತ್ತಿರವಿರುವ ಉತ್ತರ ನಾಡಿನ ಎಲ್ಲ ಅರಸರು, ಲೋಕದ ಸಕಲ ರಾಜ್ಯಗಳು, ಇವರೆಲ್ಲರು ಕುಡಿದ ಮೇಲೆ ಬಾಬಿಲೋನಿನ ಅರಸನು ಕುಡಿಯುವನು.


ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;


ಇಗೋ, ಉತ್ತರದ ರಾಜ್ಯಗಳನ್ನೆಲ್ಲಾ ನಾನು ಕರೆಯುವೆನು; ಅವರು ಬಂದು ಜೆರುಸಲೇಮಿನ ಊರಬಾಗಿಲುಗಳ ಎದುರಿನಲ್ಲೂ ಅದರ ಎಲ್ಲ ಪೌಳಿಗೋಡೆಗಳ ಸುತ್ತಲೂ ಜುದೇಯದ ಎಲ್ಲ ನಗರಗಳಲ್ಲೂ ತಮ್ಮ ತಮ್ಮ ಸಿಂಹಾಸನಗಳನ್ನು ಹಾಕಿಕೊಳ್ಳುವರು.


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”


ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು