Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:21 - ಕನ್ನಡ ಸತ್ಯವೇದವು C.L. Bible (BSI)

21 ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾವು ಸೆರೆಯಾಗಿ ಹನ್ನೆರಡನೆಯ ವರುಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಯೆರೂಸಲೇವಿುನಿಂದ ಪಲಾಯನಮಾಡಿದವನೊಬ್ಬನು ನನ್ನ ಬಳಿಗೆ ಬಂದು - ಪಟ್ಟಣವು ಶತ್ರುವಶವಾಯಿತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೇ ದಿವಸದಲ್ಲಿ ಜೆರುಸಲೇಮಿನಿಂದ ಒಬ್ಬನು ನನ್ನ ಬಳಿಗೆ ಬಂದನು. ಅವನು ರಣರಂಗದಿಂದ ತಪ್ಪಿಸಿಕೊಂಡು ಬಂದಾತನು. ಅವನು, “ನಗರವು ಪರಾಧೀನವಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:21
15 ತಿಳಿವುಗಳ ಹೋಲಿಕೆ  

ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ,


ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು.


ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.


ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು.


ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.


ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.


“ನರಪುತ್ರನೇ, ಈ ದಿನದ ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬಿಲೋನಿನ ಅರಸನು ಜೆರುಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.


ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:


ಹನ್ನೆರಡನೆಯ ವರ್ಷದ ಹದಿನೈದನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು