Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:13 - ಕನ್ನಡ ಸತ್ಯವೇದವು C.L. Bible (BSI)

13 ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:13
30 ತಿಳಿವುಗಳ ಹೋಲಿಕೆ  

“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ.


ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?


ಎಂದು ಹೇಳುತ್ತಾ ಯೋಬನು ಬಾಯಿತೆರೆಯುತ್ತಾನೆ ವ್ಯರ್ಥವಾಗಿ ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ ಬಹಳವಾಗಿ.”


ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”


ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.


ನೀವು ಹಿಜ್ಕೀಯನಿಂದ ಮರುಳಾಗಿ ಮೋಸಹೋಗಬೇಡಿ; ಅವನನ್ನು ನಂಬಲೂಬೇಡಿ. ಯಾವ ರಾಜ್ಯಜನಾಂಗಗಳ ದೇವತೆಯೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆಹೋದರು. ಅಂದ ಮೇಲೆ, ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?".


ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”


“ನನಗೆ ವಿರೋಧವಾಗಿ ಗೊಣಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟುಕಾಲ ಸಹಿಸಲಿ! ಈ ಇಸ್ರಯೇಲರು ನನಗೆ ವಿರುದ್ಧ ಗೊಣಗುಟ್ಟುವ ಮಾತುಗಳು ನನಗೆ ಕೇಳಿಸಿವೆ.


ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.


ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.


ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.


“ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಮಾತ್ರ ಮಾತಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?’ ಎಂದು ಹೇಳತೊಡಗಿದರು.


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಕಿವಿಮಾಡಿದವನು ಕೇಳದಿರುವನೋ? I ಕಣ್ಣುಕೊಟ್ಟವನು ನೋಡದಿರುವನೋ? II


ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು