Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:11 - ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಫಲಭರಿತವಾಗುವುವು. ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮಸ್ಥಿತಿಗೆ ತರುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:11
33 ತಿಳಿವುಗಳ ಹೋಲಿಕೆ  

ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.


“ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.


ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.


ಆಗ ಸಮಾರಿಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರನ್ನೂ ಅವರ ಕುವರಿಯರನ್ನೂ ನಿನ್ನನ್ನೂ ನಿಮ್ಮ ಪೂರ್ವಸ್ಥಿತಿಗೆ ತರುವೆ.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.


ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.


ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.


ನಿಮ್ಮ ಪಿತೃಗಳಿಗೆ ಸ್ವಂತವಾಗಿದ್ದ ನಾಡಿನಲ್ಲಿ ಸೇರಿಸುವರು. ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಒಳಿತನ್ನುಂಟುಮಾಡುವರು; ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವರು.


ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ನಿಮ್ಮ ಸಹೋದರರನ್ನು ‘ನಮ್ಮವರೇ' ಎಂದೂ ನಿಮ್ಮ ಸಹೋದರಿಯರನ್ನು’ಪ್ರೀತಿಪಾತ್ರರೇ’ ಎಂದೂ ಸಂಬೋಧಿಸಿರಿ.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು