Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:15 - ಕನ್ನಡ ಸತ್ಯವೇದವು C.L. Bible (BSI)

15 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:15
21 ತಿಳಿವುಗಳ ಹೋಲಿಕೆ  

ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ನೆನೆಸಿಕೊ ಪ್ರಭು, ನಿನ್ನ ಅಪಮಾನಿತ ಸೇವಕನನು I ಸ್ಮರಿಸಿಕೊ ಆತ ಹೊತ್ತಿರುವ ಪರರ ನಿಂದೆಯನು II


“ಹೀಗಿರಲು ಇಸ್ರಯೇಲ್ ನಾಡಿನ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ, ತೊರೆ-ತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ಕೋಪೋದ್ರೇಕದಿಂದ ರೋಷಾವೇಷದಿಂದ ಮಾತನಾಡಿದ್ದೇನೆ. ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


“ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.


ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.


ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.


ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ; ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡದಿರುವೆ;


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -


“ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.


ದಯೆತೋರು ಪ್ರಭು, ನಮಗೆ ದಯೆ ತೋರು I ಅತ್ಯಧಿಕವಾಗಿ ನಾವು ತಿರಸ್ಕೃತರು II


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗೋಗನು ಇಸ್ರಯೇಲ್ ನಾಡಿನ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು