Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:30 - ಕನ್ನಡ ಸತ್ಯವೇದವು C.L. Bible (BSI)

30 ನೀವು ಕ್ಷಾಮದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀವು ಕ್ಷಾಮದೇಶದವರೆಂದು ಜನಾಂಗಗಳು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿಮ್ಮ ಮರಗಳಿಂದ ಯಥೇಚ್ಛವಾಗಿ ಹಣ್ಣು ದೊರಕುವಂತೆ ಮಾಡುವೆನು. ಹೊಲಗಳು ಒಳ್ಳೆಯ ಬೆಳೆಗಳನ್ನು ಕೊಡುವಂತೆ ಮಾಡಿ ನೀವು ಅನ್ಯದೇಶದಲ್ಲಿ ಹಸಿವಿನಿಂದ ನರಳುವ ದಿವಸಗಳು ತಿರುಗಿ ಬಾರದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:30
11 ತಿಳಿವುಗಳ ಹೋಲಿಕೆ  

ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲ ಸ್ಥಳಗಳಿಂದ ಬಿಡಿಸಿ, ಜನಾಂಗಗಳ ವಶದಿಂದ ತಪ್ಪಿಸಿ, ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ ಇಸ್ರಯೇಲಿನ ಬೆಟ್ಟಗಳಲ್ಲೂ, ತೊರೆಗಳ ಬಳಿಯಲ್ಲೂ ನಾಡಿನ ಎಲ್ಲ ಹಕ್ಕೆಗಳಲ್ಲೂ ಮೇಯಿಸುವೆನು;


ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.


ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


“ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು