Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:22 - ಕನ್ನಡ ಸತ್ಯವೇದವು C.L. Bible (BSI)

22 ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ ಭಿನ್ನರಾಜ್ಯದವರಾಗಿಯೂ ಇರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:22
32 ತಿಳಿವುಗಳ ಹೋಲಿಕೆ  

ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.


ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


ನಿಮ್ಮ ಹೊಲಗಳನ್ನು ಉಳುಮೆಮಾಡಿ ಬಿತ್ತುವರು; ನಿಮ್ಮಲ್ಲಿ ಬಹುಜನರು ಅಂದರೆ, ಇಸ್ರಯೇಲ್ ವಂಶವೆಲ್ಲವೂ ವಾಸಿಸುವಂತೆಮಾಡುವೆನು; ಪಟ್ಟಣಗಳು ಜನಭರಿತವಾಗುವುವು, ಹಾಳುನಿವೇಶನಗಳಲ್ಲಿ ಕಟ್ಟಡಗಳು, ಏಳುವುವು;


ಆಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಕೂಡಲೆ ಜುದೇಯ ಮತ್ತು ಇಸ್ರಯೇಲ್ ನಡುವೆ ಇದ್ದ ಸೋದರ ಸಂಬಂಧವನ್ನು ಮುರಿಯಬೇಕೆಂದು ‘ಐಕ್ಯ’ವೆಂಬ ನನ್ನ ಎರಡನೇ ಕೋಲನ್ನು ಮುರಿದುಬಿಟ್ಟೆ.


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು