Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:28 - ಕನ್ನಡ ಸತ್ಯವೇದವು C.L. Bible (BSI)

28 ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಾಯೇಲನ್ನು ಮೀಸಲು ಮಾಡಿಕೊಂಡಾತನು ಯೆಹೋವನಾದ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರನ್ನು ನನ್ನ ವಿಶೇಷ ಜನರೆಂದು ಅವರಿಗೆ ತಿಳಿದುಬರುವದು. ಯಾಕೆಂದರೆ ಅವರ ಮಧ್ಯೆ ನನ್ನ ಪರಿಶುದ್ಧ ಸ್ಥಾನವನ್ನು ನಿರಂತರಕ್ಕೂ ಇರಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:28
26 ತಿಳಿವುಗಳ ಹೋಲಿಕೆ  

ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”


ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II


ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II


“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II


ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪವಿತ್ರಜನರಾಗುವಂತೆ ಮಾಡುವ ಸರ್ವೇಶ್ವರ.


ಇದಲ್ಲದೆ, ಇಸ್ರಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿಹೋದರೆಂದು ಮತ್ತು ಅವರು ನನಗೆ ದ್ರೋಹ ಮಾಡಿದ್ದರಿಂದಲೆ ನಾನು ಅವರಿಗೆ ವಿಮುಖನಾಗಿ ಅವರೆಲ್ಲರು ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂದು ಜನಾಂಗಗಳಿಗೆ ಗೊತ್ತಾಗುವುದು;


ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ,


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:


ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


ನಾನು ಜನರ ಮಧ್ಯೆ ವಾಸಿಸುವುದಕ್ಕೆ ನನಗೊಂದು ಗುಡಾರವನ್ನು ಕಟ್ಟಿಸಬೇಕು.


ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು