Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಎಲುಬುಗಳ ಮೇಲೆ ಧ್ವನಿಯನ್ನು ಹರಡಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು, “ನನ್ನ ಪರವಾಗಿ ಆ ಎಲುಬುಗಳೊಂದಿಗೆ ಮಾತನಾಡು. ಅವುಗಳಿಗೆ ಹೀಗೆ ಹೇಳು: ‘ಒಣಗಿದ ಎಲುಬುಗಳೇ, ಯೆಹೋವನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ನನಗೆ ಹೇಳಿದ್ದೇನೆಂದರೆ, “ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:4
17 ತಿಳಿವುಗಳ ಹೋಲಿಕೆ  

ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.


“ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:


ನಾಡೇ, ನಾಡೇ, ಎಲೈ ನಾಡೇ, ಸರ್ವೇಶ್ವರನ ಮಾತಿಗೆ ಕಿವಿಗೊಡು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.


ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.


“ಕಿವುಡ ಜನರೇ ಕೇಳಿ ಕುರುಡರಾದ ನೀವು ಕಣ್ಣಿಟ್ಟು ನೋಡಿ;


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.


ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.


ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.


ನನ್ನನ್ನು ಹೆಣೆದೆ ಎಲುಬು ನರಗಳಿಂದ ನನ್ನನ್ನು ಹೊದಿಸಿದೆ ಮಾಂಸ ಚರ್ಮಗಳಿಂದ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು