Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:12 - ಕನ್ನಡ ಸತ್ಯವೇದವು C.L. Bible (BSI)

12 ‘ಕೊಳ್ಳೆಹೊಡೆಯಬೇಕು, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕು ಹಾಗು ಜನಾಂಗಗಳಿಂದ ಒಟ್ಟುಗೂಡಿ, ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕು’ ಎಂದು ಕುತಂತ್ರ ಕಲ್ಪಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೂರೆಗೆಯ್ದು ಕೊಳ್ಳೆಹೊಡೆಯಬೇಕೆಂತಲೂ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಒಟ್ಟುಗೂಡಿ ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಅವರನ್ನು ಸೋಲಿಸಿ ಅವರ ಬಳಿಯಲ್ಲಿರುವ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ಆ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಆ ಜನರಿಗೆ ದನಕರುಗಳೂ ಸ್ವತ್ತುಗಳೂ ಇವೆ. ಅವರು ಲೋಕದ ಕೇಂದ್ರ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಬಲಾಢ್ಯ ದೇಶಗಳು ಬೇರೆ ಬಲಾಢ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಬೇಕು’ ಎಂದು ನೀನು ಹೇಳಿಕೊಳ್ಳುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಸುಲಿಗೆಯನ್ನು ಮತ್ತು ಕೊಳ್ಳೆಯನ್ನು ತೆಗೆದುಕೊಳ್ಳುವೆನು. ಹೀಗೆ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳನ್ನು ಎದುರಿಸುವೆನು. ಜನಾಂಗಗಳಿಂದ ಒಟ್ಟುಗೂಡಿ, ಪಶುಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಿಸುವವರ ಮೇಲೆಯೂ ಕೈಹಾಕುವೆನು,” ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:12
14 ತಿಳಿವುಗಳ ಹೋಲಿಕೆ  

ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


“ನೋಡು ದೇಶನಾಭಿಗಿರಿಯಿಂದ ಜನರು ಬರುತ್ತಿದ್ದಾರೆ: ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು