Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 38:16 - ಕನ್ನಡ ಸತ್ಯವೇದವು C.L. Bible (BSI)

16 ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 38:16
32 ತಿಳಿವುಗಳ ಹೋಲಿಕೆ  

“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲ ದ್ರೋಹಿಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು.


ಸುತ್ತಮುತ್ತಲಿನ ರಾಷ್ಟ್ರಗಳೇ, ನೀವೆಲ್ಲರೂ ತ್ವರೆಮಾಡಿ ಕೂಡಿಬನ್ನಿ,” ಸರ್ವೇಶ್ವರ, ನಿಮ್ಮ ಯೋಧರನ್ನು ರಣರಂಗಕ್ಕೆ ಇಳಿಸಿರಿ.


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು